ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.
Cross references
ಇದಲ್ಲದೆ ಕರ್ತನು ಇಸ್ರಾ ಯೇಲ್ಯರಿಗೆ ಮಾಡಿದ ಎಲ್ಲಾ ಉಪಕಾರಕ್ಕಾಗಿಯೂ ಆತನು ಅವರನ್ನು ಐಗುಪ್ತ್ಯರ ಕೈಗಳಿಂದ ತಪ್ಪಿಸಿದ್ದ ಕ್ಕಾಗಿಯೂ ಇತ್ರೋವನು ಸಂತೋಷಪಟ್ಟನು.
ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!
ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.
ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
ಏನು, ದೇವರ ವಾಕ್ಯವು ನಿಮ್ಮಿಂದಲೇ ಹೊರ ಟಿತೋ? ನಿಮಗೆ ಮಾತ್ರವೇ ಬಂತೋ?
ಇಂಥ ಭರವಸವು ಕ್ರಿಸ್ತನ ಮೂಲಕವೇ ದೇವರ ಮುಂದೆ ನಮಗುಂಟು.
ಹೀಗಿರುವದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳನ್ನು ನೆನಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಚ್ಚಳಪಡುತ್ತೇವೆ.
ಕಡೇದಾಗಿ ಸಹೋದರರೇ, ನಮಗೋ ಸ್ಕರ ಪ್ರಾರ್ಥನೆ ಮಾಡಿರಿ ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಮಹಿಮೆ ಹೊಂದುವ ಹಾಗೆಯೂ
ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.
ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.
ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.