ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
Cross references
ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.
ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ.
ಆದರೆ ಆತನು ಪ್ರತ್ಯುತ್ತರವಾಗಿ ಅವರಿಗೆ--ದೇವರ ವಾಕ್ಯವನ್ನು ಕೇಳಿ ಅದರಂತೆ ಮಾಡುವ ಇವರೇ ನನ್ನ ತಾಯಿಯೂ ನನ್ನ ಸಹೋದರರೂ ಆಗಿದ್ದಾರೆ ಎಂದು ಹೇಳಿದನು.
ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ.
ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು
ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ.
ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.
ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು
ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.
ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ.
ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
ನಮ್ಮ ಪ್ರಾರ್ಥನೆಗಳಲ್ಲಿ ನಿಮ್ಮನ್ನು ಜ್ಞಾಪಕ ಮಾಡಿ ಕೊಂಡು ನಾವು ಯಾವಾಗಲೂ ನಿಮ್ಮೆಲ್ಲರ ವಿಷಯವಾಗಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.
ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು.
ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.