ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
Cross references
ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.
ಇದು ನನ್ನ ಪ್ರಾಣಕ್ಕೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಕರ್ತನಿಂದ ಪ್ರತಿಫಲವಾಗಿರಲಿ.
ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು.
ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು.
ಪ್ರಧಾನ ಯಾಜಕರೂ ನಮ್ಮ ಅಧಿಕಾರಿಗಳೂ ಆತನನ್ನು ಮರಣ ದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿದರು.
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು).
ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು.
ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.