ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
Cross references
ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ;
ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ,
ಅರಸನಾದ ಆಹಾಜನು ಆಜ್ಞಾಪಿಸಿದ ಪ್ರಕಾರವೇ ಯಾಜಕನಾದ ಊರೀಯನು ಮಾಡಿದನು.
ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ.
ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ;
ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ.
ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ--
ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು?
ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.
ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.
ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.
ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.
ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ.
ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.
ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ನಿನಗೆ ಒಪ್ಪಿಸಲ್ಪಟ್ಟ ಆ ಒಳ್ಳೇದನ್ನು ನೀನು ಕಾಪಾಡು.
ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
ತನ್ನ ವಾಕ್ಯ ಸಾರೋಣದ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರ ಆ ಸಾರೋಣ ವನ್ನು ಒಪ್ಪಿಸಿದನು.
ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.