ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.
Cross references
ತನ್ನ ಸ್ನೇಹಿತರನ್ನು ಹೊಗಳಿ ಮಾತನಾಡುವವನ ಮಕ್ಕಳ ಕಣ್ಣುಗಳು ಕ್ಷೀಣವಾಗುವವು.
ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು.ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?
ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.
ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.
ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.
ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.
ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.
ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ನಾನು ಯಾರ ಬೆಳ್ಳಿಯನ್ನಾಗಲಿ ಇಲ್ಲವೆ ಭಂಗಾರವನ್ನಾಗಲಿ ಇಲ್ಲವೆ ವಸ್ತ್ರವನ್ನಾಗಲಿ ಬಯಸಲಿಲ್ಲ.
ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
ನಮ್ಮನ್ನು ಸೇರಿಸಿಕೊಳ್ಳಿರಿ; ನಾವು ಯಾರಿಗೂ ಅನ್ಯಾಯಮಾಡಲಿಲ್ಲ. ಯಾರನ್ನೂ ಕೆಡಿಸಲಿಲ್ಲ, ಯಾರನ್ನೂ ವಂಚಿಸಲಿಲ್ಲ.
ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮಿಂದ ನಾನು ಲಾಭ ಪಡೆದುಕೊಂಡೆನೋ?
ಈಗ ನಾನು ನಿಮಗೆ ಬರೆಯುವವುಗಳ ವಿಷಯ ದಲ್ಲಿ ಇಗೋ, ದೇವರ ಮುಂದೆ ನಾನು ಸುಳ್ಳಾಡು ವದಿಲ್ಲ.
ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ
ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ,