ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.
Cross references
ಅಪ್ಪಣೆ ಕೊಡು; ನಾವು ಯೊರ್ದನಿನ ವರೆಗೂ ಹೋಗಿ ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತಕ್ಕೊಂಡು ಬಂದು ವಾಸವಾಗಿರುವದಕ್ಕೆ ನಮಗೋ ಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು ಅಂದರು. ಅವನು--ಹೋಗಿರಿ ಅಂದನು.
ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.
ಪ್ರತಿದಿನಕ್ಕೆ ಸಿದ್ಧಮಾಡಿದ್ದೇನಂದರೆ, ಒಂದು ಎತ್ತೂ ಉತ್ತಮವಾದ ಆರು ಕುರಿಗಳೂ; ಕೋಳಿಗಳೂ, ಹತ್ತು ದಿವಸಕ್ಕೆ ಒಂದು ಸಾರಿ ಸಕಲ ವಿಧವಾದ ದ್ರಾಕ್ಷಾರಸವೂ ನನಗೋಸ್ಕರ ಸಿದ್ಧಮಾಡಲ್ಪಟ್ಟವು. ಆದರೆ ಈ ಜನರ ಮೇಲೆ ಇದ್ದ ದಾಸತ್ವ ಭಾರವಾಗಿದ್ದದರಿಂದ ನಾನು ಅಧಿಪತಿಯಾದವನ ರೊಟ್ಟಿಯನ್ನು ಇದಕ್ಕೋಸ್ಕರ ಕೇಳಿದ್ದಿಲ್ಲ.ನನ್ನ ದೇವರೆ, ನನಗೆ ಮೇಲನ್ನು ಮಾಡಲು ನಾನು ಈ ಜನರಿಗೆ ಮಾಡಿದ ಎಲ್ಲವನ್ನು ಜ್ಞಾಪಕಮಾಡು.
ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.
ತನ್ನ ವ್ಯಾಪಾರದ ಸರಕು ಒಳ್ಳೇದೆಂದು ಆಕೆಯು ತಿಳು ಕೊಳ್ಳುತ್ತಾಳೆ; ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
ಇಸ್ರಾಯೇಲಿನ ಮನೆತನದವರೇ,ಕರ್ತನು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ;
ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.
ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ?
ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.
ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ.
ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ.
ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯ ದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ; ನಾನು ಮಾಡಿದ ಈ ಅನ್ಯಾಯವನ್ನು ಕ್ಷಮಿಸಿರಿ.
ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ.
ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ.
ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯಲ್ಲಿ ಕೊರತೆಯನ್ನು ಪೂರೈಸುವದಕ್ಕೂ ನಾವು ಹಗಲಿರುಳು ಅತ್ಯಧಿಕವಾಗಿ ಬೇಡುವವರಾಗಿದ್ದೇವೆ.
ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ;
ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.
ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.
ನಿಜವಾಗಿಯೂ ದಿಕ್ಕಿಲ್ಲದ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳ ಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.