ಈ ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು.
Cross references
ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.
ಮುಂಜಾನೆಗೆ ಮೊದಲೇ ಅರಸನು ಎದ್ದು ತ್ವರೆಯಾಗಿ ಸಿಂಹಗಳ ಗವಿಯ ಬಳಿಗೆ ಹೋದನು.
ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.
ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.
ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.
ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಶರೀರಕ್ಕೆ ಏನೂ ವಿಶ್ರಾಂತಿಯಾಗಲಿಲ್ಲ; ಆದರೆ ಎಲ್ಲಾ ಕಡೆಯಲ್ಲಿಯೂ ನಮಗೆ ಕಳವಳವಿತ್ತು ಹೊರಗೆ ಕಲಹ; ಒಳಗೆ ಭಯವಿತ್ತು.
ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ಕ್ರಿಸ್ತನ ಕೃಪೆಯಲ್ಲಿ ನಿಮ್ಮನ್ನು ಕರೆದಾತನಿಂದ ನೀವು ಇಷ್ಟು ಬೇಗನೆ ಬೇರೆ ಸುವಾರ್ತೆಗೆ ತಿರುಗಿಕೊಂಡಿರೆಂದು ನಾನು ಆಶ್ಚರ್ಯಪಡುತ್ತೇನೆ.
ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.
ನಾವು ನಿಮಗೋಸ್ಕರ ಪ್ರಯಾಸ ಪಟ್ಟದ್ದು ನಿಷ್ಪಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ.
ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
ಸಹೋದರರೇ, ನಾವು ನಿಮ್ಮ ಬಳಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂಬದನ್ನು ನೀವೇ ತಿಳಿದಿದ್ದೀರಿ.
ಆದದರಿಂದ ಇನ್ನು ತಡೆಯಲಾರದೆ ನಾವು ಅಥೇನೆಯಲ್ಲಿ ಒಬ್ಬಂಟಿಗರಾಗಿಯೇ ಇರುವದು ಒಳ್ಳೇದೆಂದು ಯೋಚಿಸಿದೆವು;
ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ
ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ.