ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು?
Cross references
ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು.
ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.
ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
ಆದರೆ ದಾವೀದನು ವಿಾಕಳಿಗೆ--ನಿನ್ನ ತಂದೆಗಿಂತಲೂ ಅವನ ಮನೆಯವರೆಲ್ಲರಿಗಿಂತಲೂ ನನ್ನನ್ನು ಕರ್ತನು ತನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ನೇಮಿಸುವೆನು ಎಂದು ಆದುಕೊಂಡ ಕರ್ತನ ಸಮ್ಮು ಖದ ಮುಂದೆಯೇ ಆಯಿತು.
ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು?
ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ ಅವರು ಕರ್ತನನ್ನೂ ಆತನ ಜನವಾದ ಇಸ್ರಾಯೇ ಲನ್ನೂ ಸ್ತುತಿಸಿದರು.
ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.
ಆದರೆ ನೀತಿವಂತರು ಸಂತೋಷಿಸಲಿ; ದೇವರ ಮುಂದೆ ಉತ್ಸಾಹಪಡಲಿ; ಹೌದು, ಅವರು ಅತಿಸಂತೋಷದಿಂದ ಹರ್ಷಿಸುವವರಾಗಲಿ.
ಆದರೆ ನಾನು ಬಿಟ್ಟುಬಿಡದೆ ನಿನ್ನನ್ನು ನಿರೀಕ್ಷಿ ಸುತ್ತಾ ನಿನ್ನನ್ನು ಇನ್ನೂ ಹೆಚ್ಚೆಚ್ಚಾಗಿ ಸುತ್ತಿಸುವೆನು.
ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
ನಮ್ಮ ಪ್ರಾರ್ಥನೆಗಳಲ್ಲಿ ನಿಮ್ಮನ್ನು ಜ್ಞಾಪಕ ಮಾಡಿ ಕೊಂಡು ನಾವು ಯಾವಾಗಲೂ ನಿಮ್ಮೆಲ್ಲರ ವಿಷಯವಾಗಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.