ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ.
Cross references
ವಿವಾದದೊಂದಿಗೆ ಬಲಿಗಳಿಂದ ತುಂಬಿದ ಮನೆಗಿಂತ ಸಮಾಧಾನದ ಒಣತುತ್ತೇ ಮೇಲು.
ಪ್ರಯಾಸದಿಂದಲೂ ಪ್ರಾಣಕ್ಕೆ ಆಯಾಸದಿಂದಲೂ ತುಂಬಿದ ಎರಡು ಕೈಗಳಿಂದಾದದ್ದಕಿಂತ ನೆಮ್ಮದಿಯಿಂದ ಕೂಡಿದ ಒಂದು ಕೈಯಿಂದಾದದ್ದೇ ಲೇಸು.
ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.
ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ
ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ.
ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ.
ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
ಆದದರಿಂದ ನಾವು (ದೇಹವೆಂಬ ಮನೆಯಲ್ಲಿದ್ದರೂ ಸರಿಯೇ) ಅದನ್ನು ಬಿಟ್ಟಿ ದ್ದರೂ ಸರಿಯೇ, ಆತನನ್ನು ಮೆಚ್ಚಿಸುವವರಾಗಿರಬೇಕೆಂದು ನಾವು ಪ್ರಯಾಸ ಪಡುತ್ತೇವೆ.
ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ.
ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ;
ಹೀಗೆ ನಾವು ಶಾಂತಿ ಸಮಾಧಾನಗಳಿಂದ ಕೂಡಿದ ಜೀವನ ವನ್ನು ಪೂರ್ಣ ಭಕ್ತಿಯಿಂದಲೂ ಗೌರವದಿಂದಲೂ ನಡಿಸುವದಕ್ಕಾಗುವದು.
ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ.
ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ
ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ.ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.
ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು.