ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.
Cross references
ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
ಸತ್ತವರಿ ಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು, ನಿಮ್ಮ ಮೇಲೆ ಯಾವ ಚಿನ್ಹೆಗಳನ್ನೂ ಮುದ್ರಿಸಿಕೊಳ್ಳ ಬಾರದು; ನಾನೇ ಕರ್ತನು.
ಆದರೆ ತನ್ನ ಹತ್ತಿರದ ಸಂಬಂಧಿಯಾಗಿ, ಅಂದರೆ ಅವನ ತಾಯಿ, ತಂದೆ, ಮಗ, ಮಗಳು, ಸಹೋದರನಿಗಾಗಿ
ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ.
ಆದರೆ ತನ್ನ ಸೇವಕರು ಪಿಸುಗುಟ್ಟುವದನ್ನು ದಾವೀದನು ನೋಡಿ ಮಗುವು ಸತ್ತುಹೋಯಿತೆಂದು ಗ್ರಹಿಸಿ ಕೊಂಡನು. ಆಗ ದಾವೀದನು ತನ್ನ ಸೇವಕರಿಗೆ--ಮಗುವು ಸತ್ತುಹೋಯಿತೋ ಅಂದನು. ಅವರು --ಸತ್ತುಹೋಯಿತು ಅಂದರು.
ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
ಇಲ್ಲದಿದ್ದರೆ ಅರಸನಾದ ನನ್ನ ಒಡೆಯನು ತನ್ನ ಪಿತೃಗಳ ಸಂಗಡ ಮಲಗಿಕೊಂಡಿರುವಾಗ ನಾನೂ ನನ್ನ ಮಗನಾದ ಸೊಲೊಮೋನನೂ ಅಪರಾಧಿಗಳಾಗಿ ಎಣಿಸಲ್ಪಟ್ಟೇವು ಅಂದಳು.
ಹೀಗೆಯೇ ದಾವೀದನು ತನ್ನ ಪಿತೃಗಳ ಸಂಗಡ ಮಲಗಿಕೊಂಡನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು.
ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;
ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.
ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು; ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು.
ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಆದರೆ ಆತನು-- ಅಳಬೇಡಿರಿ, ಆಕೆಯು ಸತ್ತಿಲ್ಲ; ಆದರೆ ನಿದ್ರೆ ಮಾಡು ತ್ತಾಳೆ ಅಂದನು.
ಈ ಮಾತುಗಳನ್ನು ಹೇಳಿದ ತರುವಾಯ ಆತನು ಅವರಿಗೆ--ನಮ್ಮ ಸ್ನೇಹಿತನಾದ ಲಾಜರನು ನಿದ್ರಿಸುತ್ತಿದ್ದಾನೆ; ಆದರೆ ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಾಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು.
ಮಾರ್ಥಳು ಆತನಿಗೆ--ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ತಿರಿಗಿ ಎದ್ದೇಳುವನೆಂದು ನಾನು ಬಲ್ಲೆನು ಎಂದು ಹೇಳಿದಳು.
ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;
ಸಹೋದರರೇ, ಆತ್ಮಿಕ ವರಗಳನ್ನು ಕುರಿತು ನಿಮಗೆ ತಿಳಿಯದಿರಬಾರದೆಂದು ನಾನು ಅಪೇಕ್ಷಿಸುತ್ತೇನೆ.
ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ.
ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆ ಹೋದವರೂ ನಾಶವಾದರು.
ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ, ಕರ್ತನು ಪ್ರತ್ಯಕ್ಷನಾಗು ವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದ ವರಿಗಿಂತ ಮುಂದಾಗುವದೇ ಇಲ್ಲ.
ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.
ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ.