ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
Cross references
ನಾನು ನಿನ್ನನ್ನು ಬಿಟ್ಟು ಹೋಗುವಾಗ ಆಗುವದೇನಂದರೆ, ಕರ್ತನ ಆತ್ಮನು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯು ವನು. ನಾನು ಬಂದು ಅಹಾಬನಿಗೆ ತಿಳಿಸಿದಾಗ ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕು ವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕತನ ದಿಂದ ಕರ್ತನಿಗೆ ಭಯಪಡುತ್ತೇನೆ.
ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
ಇದ ಲ್ಲದೆ ಅವರು ಅವನಿಗೆ--ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ; ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಯಾಗಲಿ, ಒಂದು ವೇಳೆ ಕರ್ತನ ಆತ್ಮನು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ ತಗ್ಗಿನ ಲ್ಲಾದರೂ ಹಾಕಿರಬಹುದು ಅಂದರು.
ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು.
ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು.
ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.
ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.
ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ.
ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.)
ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ, ಕರ್ತನು ಪ್ರತ್ಯಕ್ಷನಾಗು ವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದ ವರಿಗಿಂತ ಮುಂದಾಗುವದೇ ಇಲ್ಲ.
ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.
ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
ಆಮೇಲೆ ಅವರಿಗೆ--ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು. ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡಿದರು.
ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
ಪಟ್ಟಣದಲ್ಲಿ ನಾನು ಆಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿ ರುವ ಕರ್ತನೂ ಕುರಿಮರಿಯಾದಾತನೂ ಅದರ ಆಲಯವಾಗಿದ್ದಾರೆ.
ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು.