ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.
Cross references
ಕದಿಯಬಾರದು.
ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
ನೀವು ಕದಿಯಬಾರದು; ಒಬ್ಬರಿಗೊಬ್ಬರು ಸುಳ್ಳಾಡಿ ಮೋಸಮಾಡಬಾರದು.
ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.
ನೆರೆಯವನಿಗೆ ಏನಾದರೂ ಮಾರಾಟಮಾಡಿದ್ದರೆ ಇಲ್ಲವೆ ನೆರೆಯವ ನಿಂದ ಕೊಂಡು ಕೊಂಡಿದ್ದರೆ ಒಬ್ಬರಿಗೊಬ್ಬರು ಉಪದ್ರ ಪಡಿಸಿಕೊಳ್ಳಬಾರದು.
ಆದದರಿಂದ ನೀವು ಒಬ್ಬರಿಗೊಬ್ಬರು ಉಪದ್ರಪಡಿಸಿಕೊಳ್ಳಬಾರದು; ದೇವರಿಗೆ ನೀನು ಭಯ ಪಡಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.
ನಿನ್ನ ಚೀಲದಲ್ಲಿ ದೊಡ್ಡದು ಒಂದು, ಸಣ್ಣದು ಒಂದು ಹೀಗೆ ವಿವಿಧ ತೂಕಗಳು ನಿನಗಿರಬಾರದು.
ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.
ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ,
ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.
ಕರ್ತನು ದೀನನಿಗೆ ವ್ಯಾಜ್ಯವನ್ನೂ ಬಡವರಿಗೆ ನ್ಯಾಯವನ್ನೂ ತೀರಿಸುವನೆಂದು ನಾನು ಬಲ್ಲೆನು.ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.
ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.
ನ್ಯಾಯದ ತೂಕವೂ ತಕ್ಕಡಿಯೂ ಕರ್ತನವು; ಚೀಲದ ತೂಕಗಳು ಆತನ ಕೈಕೆಲಸವೇ.
ಇದು ನಿಷ್ಪ್ರಯೋಜಕವಾದದ್ದು, ಇದು ನಿಷ್ಪ್ರಯೋಜಕವಾದದ್ದು ಎಂದು ಕೊಳ್ಳು ವವನು ಹೇಳುತ್ತಾನೆ. ಅವನು ಹೋದ ಮೇಲೆ ಹೊಗ ಳುತ್ತಾನೆ.
ವಿಧವಿಧವಾದ ತೂಕ ಗಳು ಕರ್ತನಿಗೆ ಅಸಹ್ಯವಾಗಿವೆ; ಮೋಸದ ತಕ್ಕಡಿಯು ಒಳ್ಳೇದಲ್ಲ.
ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ.
ತನ್ನ ತಂದೆ ತಾಯಿಯನ್ನಾಗಲಿ ದೋಚಿಕೊಂಡು--ಇದು ದೋಷವಲ್ಲ ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.
ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.
ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.
ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ
ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ!
ನೀತಿ ಯುಳ್ಳ ಕರ್ತನು ಅದರ ಮಧ್ಯದಲ್ಲಿ ಇದ್ದಾನೆ, ಆತನು ಅನ್ಯಾಯಮಾಡುವದಿಲ್ಲ; ಪ್ರತಿ ಬೆಳಿಗ್ಗೆ ತನ್ನ ನ್ಯಾಯ ತೀರ್ಪನ್ನು ಬೆಳಕಿಗೆ ತರುತ್ತಾನೆ; ಆತನು ತಪ್ಪುವಾತನಲ್ಲ, ಆದರೆ ಅನ್ಯಾಯವಂತನು ನಾಚಿಕೆ ಯನ್ನು ಅರಿಯನು.
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು.
ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು?
ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;