ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
Cross references
ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.
ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.
ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.
ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
ಬುದ್ಧಿ ಹೀನನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ಜ್ಞಾನವನ್ನು ಅವನು ತಿರಸ್ಕರಿಸುವನು.
ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.
ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ಹೌದು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ.
ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.