ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
Cross references
ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.
ಯಾಕಂದರೆ ನಾನು ನನ್ನ ಪ್ರಾಣವನ್ನು ತಿರಿಗಿಪಡಕೊಳ್ಳುವಂತೆ ಅದನ್ನು ಕೊಡುತ್ತೇನೆ; ಆದದ ರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾನೆ.
ಒಬ್ಬನು ತನ್ನ ಸ್ನೇಹಿತರಿ ಗೋಸ್ಕರ ತನ್ನ ಪ್ರಾಣವನ್ನು ಕೊಡುವ ಪ್ರೀತಿಗಿಂತ ಹೆಚ್ಚಿನದು ಯಾವದೂ ಇಲ್ಲ.
ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.
ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.
ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.
ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.