ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ; ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ.
Cross references
ಅವನು ಅವರಿಗೆ--ಮಾರ್ಗದಲ್ಲಿ ಜಗಳವಾಡಬೇಡಿರಿ ಎಂದು ಅವರಿಗೆ ಹೇಳಿದ ಮೇಲೆ ಅವರು ಹೋದರು.
ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!
ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
ಅವನು ಯೇಸುವಿನ ವಿಷಯ ಕೇಳಿದಾಗ ಆತನು ಬಂದು ತನ್ನ ಆಳನ್ನು ಗುಣ ಮಾಡಬೇಕೆಂದು ಬೇಡಿಕೊಳ್ಳುವಂತೆ ಯೆಹೂದ್ಯರ ಹಿರಿಯರನ್ನು ಆತನ ಬಳಿಗೆ ಕಳುಹಿಸಿದನು.
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ.
(ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು.
ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?
ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.
ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ.
ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.
ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.