ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
Cross references
ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.
ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ.
ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.
ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.
ಅವನ ಕತ್ತಿಯು ದೇಶದ ಮೇಲೆ ಬರುವದನ್ನು ನೋಡಿ, ಕಹಳೆಯನ್ನೂದಿ ಜನರನ್ನು ಎಚ್ಚರಿಸಿದಾಗ,
ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.
ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.
ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.
ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
ನೀವು ಪೂರ್ಣ ವಿನಯ ಸಾತ್ವಿಕತ್ವ ಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವ ರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.
ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.
ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ಕೇಳಿದ್ದೇವೆ.
ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.
ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು.
ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;
ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.
ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ.
ಸೆರೆಯವರ ಸಂಗಡ ನೀವೂ ಬಂಧಿಸಲ್ಪಟ್ಟವರೆಂದು ಅವರನ್ನು ಜ್ಞಾಪಕ ಮಾಡಿಕೊಳ್ಳಿರಿ. ನೀವು ಶರೀರದಲ್ಲಿರುವ ದರಿಂದ ಕಷ್ಟವನ್ನು ಅನುಭವಿಸುವವರನ್ನು ನೆನಸಿರಿ.