ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
Cross references
ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
ನಾನು ಎಲ್ಲಾ ಕಾಲಗಳಲ್ಲಿ ಕರ್ತನನ್ನು ಸ್ತುತಿಸುವೆನು; ಆತನ ಸ್ತೋತ್ರವು ಯಾವಾ ಗಲೂ ನನ್ನ ಬಾಯಲ್ಲಿ ಇರುವದು.
ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ.
ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ; ಆದದರಿಂದ ಹಾದರಕ್ಕೆ ದೂರವಾಗಿರಬೇಕು.
ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.
ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.