ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು.
Cross references
ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
ಯೆರೂ ಸಲೇಮಿನಿಂದ ಉಳಿದವರೂ ಚಿಯೋನ್ ಪರ್ವತ ದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ಮಾಡುವದು.
ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ.
ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.
ಬೆಳಿಗ್ಗೆ ನಿನ್ನ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ಯಲ್ಲಿ ನಿನ್ನ ನಂಬಿಗಸ್ತಿಕೆಯನ್ನೂ
ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು.
ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು.
ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು.
ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ.
ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?
ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.
ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.
ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.