ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.
Cross references
ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು.
ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು.
ಓ ಇಸ್ರಾಯೇಲೇ, ನೀನು ಗಿಬ್ಯದ ದಿನಗಳ ಮೊದ ಲಿನಿಂದ ಪಾಪ ಮಾಡಿದ್ದೀ; ಅವರು ಅಲ್ಲೇ ನಿಂತು ಕೊಂಡರು. ಅನ್ಯಾಯದ ಮಕ್ಕಳಿಗೆ ವಿರೋಧವಾದ ಯುದ್ಧವು ಗಿಬ್ಯದಲ್ಲಿ ಅವರನ್ನು ಮುಟ್ಟಲಿಲ್ಲ.
ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.