ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.
Cross references
ಮೈಗಳ್ಳತನವು ಗಾಢ ನಿದ್ರೆಯಲ್ಲಿ ಮುಳು ಗಿಸುತ್ತದೆ; ಸೋಮಾರಿಯ ಪ್ರಾಣವು ಹಸಿವೆಗೊಳ್ಳು ವದು.
ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.
ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು.
ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.
ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.
ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?
ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.
ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ?
ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ.
ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
ನೀತಿಗಾಗಿ ಎಚ್ಚರಗೊಳ್ಳಿರಿ, ಪಾಪಮಾಡಬೇಡಿರಿ; ಕೆಲವರಿಗೆ ದೇವರ ವಿಷಯವಾದ ಜ್ಞಾನವೇ ಇಲ್ಲ; ನಾನು ಇದನ್ನು ನಿಮಗೆ ನಾಚಿಕೆ ಪಡಿಸುವದಕ್ಕಾಗಿ ಹೇಳುತ್ತೇನೆ.
ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.
ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ.
ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ
ಆದರೂ ಅವರು ಸ್ವಸ್ಥ ಬುದ್ಧಿಯಿಂದೊಡಗೂಡಿದ ನಂಬಿಕೆಯ ಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಆಕೆಯು ಮಗುವನ್ನು ಹೆರುವದರಲ್ಲಿ ರಕ್ಷಣೆ ಹೊಂದುವಳು.
ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.
ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು.
ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ.
ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.