ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
Cross references
ಹಾ! ನನ್ನ ಮಾತುಗಳು ಬರಯಲ್ಪಟ್ಟಿದ್ದರೆ, ಅವು ಪುಸ್ತಕದಲ್ಲಿ ರಚಿಸಲ್ಪಟ್ಟಿದ್ದರೆ
ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು.
ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?
ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ,
ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ.
ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ.
ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ.
ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯು ನಂಬಿಕೆಯಿಂದ ಕೂಡಿದ ಪ್ರೀತಿಯು ಸಹೋದರರಿಗೆ ಇರಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ.
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.