ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು.
Cross references
ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.
ನನಗೆ ನೇಮಿಸಿ ದ್ದನ್ನು ಆತನು ಈಡೇರಿಸುತ್ತಾನೆ; ಇವುಗಳಂತೆ ಅನೇಕವು ಆತನಲ್ಲಿ ಅವೆ.
ಎಲ್ಲವುಗಳನ್ನು ಕರ್ತನು ತನಗಾಗಿ ಮಾಡಿದ್ದಾನೆ; ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿ ದ್ದಾನೆ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,
ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.
ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
ಕಳೆದುಹೋದ ಕಾಲಗಳಲ್ಲಿ ನೀವು ದೇವರನ್ನು ನಂಬದೆ ಇದ್ದೀರಿ; ಆದಾಗ್ಯೂ ಅವರ ಅಪನಂಬಿಕೆಯ ಮೂಲಕ ನೀವು ಈಗ ಹೇಗೆ ಕರುಣೆ ಯನ್ನು ಹೊಂದಿದ್ದೀರೋ
ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.
ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ