ಕಲ್ಪನಾ ಕಥೆ ಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಾನು ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆ ಯಿಂದುಂಟಾಗುವ ದೈವಭಕ್ತಿಯನ್ನು ವೃದ್ಧಿಮಾಡುವ
Cross references
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ.
ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.
ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
ಆದರೆ ಅಜ್ಜೀಕಥೆಗಳಂತಿರುವ ಅಶುದ್ಧವಾದ ಆ ಕಥೆಗಳನ್ನು ನಿರಾಕರಿಸಿ ನೀನು ದೇವ ಭಕ್ತಿಯ ವಿಷಯದಲ್ಲಿಯೇ ಸಾಧನೆ ಮಾಡಿಕೋ.
ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ
ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.
ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.
ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
ದೇವರಾದುಕೊಂಡವರ ನಂಬಿಕೆಗನುಸಾರ ವೂ ಭಕ್ತಿಗನುಸಾರವಾದ ಸತ್ಯದ ತಿಳು ವಳಿಕೆಗನುಸಾರವೂ ದೇವರ ಸೇವಕನಾದ ಯೇಸು ಕ್ರಿಸ್ತನ ಅಪೊಸ್ತಲನಾಗಿರುವ ಪೌಲನೆಂಬ ನನಗೆ
ಅವರು ಯೆಹೂದ್ಯರ ಕಲ್ಪನಾಕಥೆಗಳಿಗೂ ಸತ್ಯಭ್ರಷ್ಟರಾದ ಮನುಷ್ಯರ ಆಜ್ಞೆ ಗಳಿಗೂ ಲಕ್ಷ್ಯಕೊಡಬಾರದು.
ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನ್ಯಾಯಪ್ರಮಾಣದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಯಾಕಂದರೆ ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.
ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.