ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.
Cross references
ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ದುಷ್ಟನು ಸಾಯುವದರಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿ ರುವದೋ ಎಂದು ದೇವರಾದ ಕರ್ತನು ಹೇಳುತ್ತಾನೆ; ಅವನು ತನ್ನ ನಡತೆಗಳಿಂದ ಹಿಂತಿರುಗಿಕೊಂಡು ಬದು ಕಿದರೆ ನನಗೆ ಸಂತೋಷವಲ್ಲವೇ?
ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು.
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.
ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು;
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು.
ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು
ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;
ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.
ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.
ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
ಇವರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಪರಿಜ್ಞಾನ ವನ್ನು ಹೊಂದಲಾರದವರು.
ದೇವರಾದುಕೊಂಡವರ ನಂಬಿಕೆಗನುಸಾರ ವೂ ಭಕ್ತಿಗನುಸಾರವಾದ ಸತ್ಯದ ತಿಳು ವಳಿಕೆಗನುಸಾರವೂ ದೇವರ ಸೇವಕನಾದ ಯೇಸು ಕ್ರಿಸ್ತನ ಅಪೊಸ್ತಲನಾಗಿರುವ ಪೌಲನೆಂಬ ನನಗೆ
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.