Home Bibles 1 ತಿಮೋಥೆಯ 2:4 · ಕನ್ನಡ ಬೈಬಲ್
1 ತಿಮೋಥೆಯ 2:4 · ಕನ್ನಡ ಬೈಬಲ್

ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.

Cross references

ಯೆಶಾಯ 45:22

ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.

ಯೆಶಾಯ 49:6

ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.

ಯೆಶಾಯ 53:11

ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.

ಯೆಶಾಯ 55:1

ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.

ಯೆಹೆಜ್ಕೇಲ 18:23

ದುಷ್ಟನು ಸಾಯುವದರಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿ ರುವದೋ ಎಂದು ದೇವರಾದ ಕರ್ತನು ಹೇಳುತ್ತಾನೆ; ಅವನು ತನ್ನ ನಡತೆಗಳಿಂದ ಹಿಂತಿರುಗಿಕೊಂಡು ಬದು ಕಿದರೆ ನನಗೆ ಸಂತೋಷವಲ್ಲವೇ?

ಯೆಹೆಜ್ಕೇಲ 18:32

ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.

ಯೆಹೆಜ್ಕೇಲ 33:11

ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?

ಹಬಕ್ಕೂಕ 2:14

ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು.

ಮತ್ತಾಯ 28:19

ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.

ಮಾರ್ಕ 16:15

ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.

ಲೂಕ 1:77

ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.

ಲೂಕ 14:23

ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು;

ಲೂಕ 24:47

ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.

ಯೋಹಾನ 3:15

ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು.

ಯೋಹಾನ 6:37

ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.

ಯೋಹಾನ 14:6

ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.

ಯೋಹಾನ 17:17

ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು

ರೋಮಾಪುರದವರಿಗೆ 3:29

ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;

ರೋಮಾಪುರದವರಿಗೆ 10:12

ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.

2 ಕೊರಿಂಥದವರಿಗೆ 5:17

ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.

1 ತೆಸಲೋನಿಕದವರಿಗೆ 2:15

ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.

1 ತಿಮೋಥೆಯ 4:10

ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.

2 ತಿಮೋಥೆಯ 2:25

ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.

2 ತಿಮೋಥೆಯ 3:7

ಇವರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಪರಿಜ್ಞಾನ ವನ್ನು ಹೊಂದಲಾರದವರು.

ತೀತ 1:1

ದೇವರಾದುಕೊಂಡವರ ನಂಬಿಕೆಗನುಸಾರ ವೂ ಭಕ್ತಿಗನುಸಾರವಾದ ಸತ್ಯದ ತಿಳು ವಳಿಕೆಗನುಸಾರವೂ ದೇವರ ಸೇವಕನಾದ ಯೇಸು ಕ್ರಿಸ್ತನ ಅಪೊಸ್ತಲನಾಗಿರುವ ಪೌಲನೆಂಬ ನನಗೆ

ತೀತ 2:11

ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.

ಹೆಬ್ರಿಯರಿಗೆ 10:26

ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.

2 ಪೇತ್ರ 3:9

ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ

ಪ್ರಕಟನೆ 14:6

ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.

Interlinear

Choose Theme