ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;
Cross references
ಓ ಇಸ್ರಾಯೇಲೇ, ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನು.
ನಮ್ಮಿಬ್ಬರ ಮೇಲೆ ಕೈ ಇಡತಕ್ಕ ಮಧ್ಯಸ್ಥಗಾರನು ನಮ್ಮ ಮಧ್ಯದಲ್ಲಿಲ್ಲ.
ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ.
ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
ಆಗ ಆ ಸೇವಕನು--ಒಡೆಯನೇ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾ ಯಿತು; ಇನ್ನೂ ಸ್ಥಳವದೆ ಅಂದನು.
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;
ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.
ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.
ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
ಮಧ್ಯಸ್ಥನು ಒಬ್ಬನ ಮಧ್ಯಸ್ಥನಲ್ಲ; ಆದರೆ ದೇವರು ಒಬ್ಬನೇ.
ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲೆಯೂ ಎಲ್ಲರ ಮುಖಾಂತರವೂ ಎಲ್ಲರಲ್ಲಿಯೂ ಇರುವಾತನಾಗಿದ್ದಾನೆ.
ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ
ಆದರೆ ಒಬ್ಬನು ಒಂದಾನೊಂದು ಸ್ಥಳದಲ್ಲಿ--ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಯಾಕೆ ನೆನಸಬೇಕು? ಇಲ್ಲವೆ ನರಪುತ್ರನು ಎಷ್ಟರವನು? ಅವನನ್ನು ಯಾಕೆ ದರ್ಶಿಸಬೇಕು?
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.
ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.