ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
Cross references
ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.
ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಕರ್ತನಾದ ದೇವರು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರುಬೀಳಲಿಲ್ಲ ಇಲ್ಲವೆ ವಿಮುಖನಾಗಲೂ ಇಲ್ಲ.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.
ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
ಆತನು ನಾಲ್ವತ್ತು ದಿವಸ ಅಡವಿ ಯಲ್ಲಿ ಸೈತಾನನಿಂದ ಶೋಧಿಸಲ್ಪಡುತ್ತಾ ಕಾಡು ಮೃಗ ಗಳೊಂದಿಗೆ ಇದ್ದನು; ಮತ್ತು ದೂತರು ಆತನನ್ನು ಉಪಚರಿಸಿದರು.
ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು.
ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
ಆದಕಾರಣ ದಾವೀದನು ಆತನನ್ನು ಕರ್ತನು ಎಂದು ಕರೆಯುವಾಗ ಆತನು ಅವನಿಗೆ ಮಗನಾಗುವದು ಹೇಗೆ ಎಂದು ಕೇಳಿದನು.
ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು.
ಅವರು ಇದಕ್ಕಾಗಿ ಬಹಳವಾಗಿ ಕಳವಳಗೊಂಡರು; ಆಗ ಇಗೋ, ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತಿದ್ದರು.
ಇದಾದ ಮೇಲೆ ಆತನು ಅವರನ್ನು ಆಶೀರ್ವದಿಸುತ್ತಿರುವಾಗ ಆತನು ಅವರಿಂದ ಪ್ರತ್ಯೇಕಿಸಲ್ಪಟ್ಟು ಮೇಲಕ್ಕೆ ಪರಲೋಕದೊಳಗೆ ಒಯ್ಯ ಲ್ಪಟ್ಟನು.
ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು.
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು.
ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ?
ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು
ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ
ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು.
ಓ ಥೆಯೊಫಿಲನೇ, ಯೇಸು ತಾನು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮನ ಮುಖಾಂತರ ಆಜ್ಞೆಗಳನ್ನು ಕೊಟ್ಟ ತರುವಾಯ
ಇದು ಯೆರೂಸಲೇಮ್ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಆ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು.
ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.