ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು.
Cross references
ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,
ಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು.
ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.
ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.
ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು.
ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
ಸಹೋದರರೇ, ನಾನು ನಿಮಗೋಸ್ಕರವೇ ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ; ಬರೆದಿರುವದನ್ನು ನೀವು ವಿಾರಿಹೋಗದೆ ನಿಮ್ಮಲ್ಲಿ ಯಾರೂ ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನು ಉಬ್ಬಿಕೊಳ್ಳಬಾರದೆಂಬದನ್ನು ನಮ್ಮಲ್ಲಿ ಕಲಿತುಕೊಳ್ಳ ಬೇಕು.
ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.
ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.
ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ
ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.