ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.
Cross references
ನನ್ನ ಕುಮಾ ರರೇ, ಹಾಗೆ ಮಾಡಬೇಡಿರಿ; ಯಾಕಂದರೆ ನಾನು ಕೇಳುವ ವರ್ತಮಾನ ಒಳ್ಳೇದಲ್ಲ; ಕರ್ತನ ಜನರು ಆಜ್ಞೆವಿಾರಿ ನಡೆಯುವ ಹಾಗೆ ಮಾಡುತ್ತೀರಿ.
ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ.
ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.
ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ
ಅಲ್ಲಿ ವಾಸಿಸುತ್ತಿದ್ದ ಅನನೀಯ ಎಂಬ ಒಬ್ಬ ಮನುಷ್ಯನು ಎಲ್ಲಾ ಯೆಹೂದ್ಯರಿಂದ ಒಳ್ಳೆಯವನೆಂದು ಸಾಕ್ಷಿಪಡೆದು ನ್ಯಾಯಪ್ರಮಾಣದ ಪ್ರಕಾರ ಭಕ್ತಿಯುಳ್ಳವನಾಗಿದ್ದನು.
ಹೊರಗಿನವರಿಗೆ ಸಹ ತೀರ್ಪು ಮಾಡುವದಕ್ಕೆ ನನಗೇನಿದೆ? ಒಳಗಿನವರಿಗೆ ತೀರ್ಪು ಮಾಡುವವರು ನೀವೇ ಅಲ್ಲವೇ?ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;
ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.
ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.
ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.
ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
ಕೆಲವರ ಪಾಪಗಳು ತೀರ್ಪಿಗೆ ಮೊದಲೇ ಬಹಿರಂಗವಾಗುತ್ತವೆ; ಕೆಲವರ ಪಾಪಗಳು ತರುವಾಯ ಹಿಂಬಾಲಿಸುತ್ತವೆ.ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.
ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು.
ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.