ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
Cross references
ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು.
ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.
ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು
ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.
ಆಗ ಕರ್ತನು--ಇಸ್ರಾ ಯೇಲಿನ ಅರಸನಾದ ಅಹಾಬನು ಹೋಗಿ ರಾಮೋತ್ ಗಿಲ್ಯಾದಿನಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ.
ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು.
ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;
ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--
ಆಕಾಶದಲ್ಲಿಯಾಗಲೀ ಭೂಮಿಯಲ್ಲಾಗಲೀ ದೇವರು ಗಳೆಂದು ಕರೆಯಲ್ಪಟ್ಟವುಗಳು ಇದ್ದಾಗ್ಯೂ (ಅನೇಕ ದೇವರುಗಳು ಮತ್ತು ಅನೇಕ ಪ್ರಭುಗಳು ಇರುತ್ತಾರೆ.)
ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.
ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;
ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ.
ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--
ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.
ನಾವಂತೂ ದೇವರಿಗೆ ಸಂಬಂಧಪಟ್ಟವ ರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಗೆ ಸಂಬಂಧಪಡದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯದ ಆತ್ಮ, ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದು ಕೊಳ್ಳುತ್ತೇವೆ.
ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.