Home Bibles 1 ತಿಮೋಥೆಯ 4:1 · ಕನ್ನಡ ಬೈಬಲ್
1 ತಿಮೋಥೆಯ 4:1 · ಕನ್ನಡ ಬೈಬಲ್

ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.

Cross references

ಆದಿಕಾಂಡ 3:3

ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು.

ಆದಿಕಾಂಡ 3:13

ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.

ಅಂಕೆಗಳ ಪುಸ್ತಕ 24:14

ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.

ದ್ವಿತೀಯೋಪದೇಶಕಾಂಡ 4:30

ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು

ದ್ವಿತೀಯೋಪದೇಶಕಾಂಡ 32:29

ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!

1 ಅರಸುಗಳು 22:22

ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.

2 ದಿನವೃತ್ತಾಂತ 18:19

ಆಗ ಕರ್ತನು--ಇಸ್ರಾ ಯೇಲಿನ ಅರಸನಾದ ಅಹಾಬನು ಹೋಗಿ ರಾಮೋತ್‌ ಗಿಲ್ಯಾದಿನಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.

ಯೆಶಾಯ 2:2

ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.

ಯೆರೆಮಿಯ 49:39

ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ.

ಯೆಹೆಜ್ಕೇಲ 1:3

ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್‌ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು.

ಯೆಹೆಜ್ಕೇಲ 38:16

ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.

ದಾನಿಯೇಲ 10:14

ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.

ದಾನಿಯೇಲ 11:35

ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;

ಹೊಶೇಯ 3:5

ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.

ಮೀಕ 4:1

ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.

ಮತ್ತಾಯ 24:5

ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.

ಯೋಹಾನ 16:13

ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.

ಅಪೋಸ್ತಲರ ಕೃತ್ಯಗಳು 13:2

ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 17:18

ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ

ಅಪೋಸ್ತಲರ ಕೃತ್ಯಗಳು 28:25

ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--

1 ಕೊರಿಂಥದವರಿಗೆ 8:5

ಆಕಾಶದಲ್ಲಿಯಾಗಲೀ ಭೂಮಿಯಲ್ಲಾಗಲೀ ದೇವರು ಗಳೆಂದು ಕರೆಯಲ್ಪಟ್ಟವುಗಳು ಇದ್ದಾಗ್ಯೂ (ಅನೇಕ ದೇವರುಗಳು ಮತ್ತು ಅನೇಕ ಪ್ರಭುಗಳು ಇರುತ್ತಾರೆ.)

1 ಕೊರಿಂಥದವರಿಗೆ 10:20

ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.

1 ಕೊರಿಂಥದವರಿಗೆ 12:11

ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.

2 ಕೊರಿಂಥದವರಿಗೆ 11:3

ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.

2 ಕೊರಿಂಥದವರಿಗೆ 11:13

ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.

ಕೊಲೊಸ್ಸೆಯವರಿಗೆ 2:18

ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.

2 ತೆಸಲೋನಿಕದವರಿಗೆ 2:3

ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;

2 ತಿಮೋಥೆಯ 3:1

ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ.

2 ತಿಮೋಥೆಯ 3:13

ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.

2 ತಿಮೋಥೆಯ 4:4

ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.

1 ಪೇತ್ರ 1:20

ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.

2 ಪೇತ್ರ 2:1

ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ

2 ಪೇತ್ರ 3:3

ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--

1 ಯೋಹಾನ 2:18

ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.

1 ಯೋಹಾನ 4:6

ನಾವಂತೂ ದೇವರಿಗೆ ಸಂಬಂಧಪಟ್ಟವ ರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಗೆ ಸಂಬಂಧಪಡದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯದ ಆತ್ಮ, ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದು ಕೊಳ್ಳುತ್ತೇವೆ.

ಯೂದ 1:4

ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ

ಯೂದ 1:18

ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು.

ಪ್ರಕಟನೆ 2:7

ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.

ಪ್ರಕಟನೆ 2:11

ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.

Interlinear

Choose Theme