ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
Cross references
ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.
ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ.
ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು.
ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.
ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
ಆದರೆ ನಾವು ಪ್ರಾರ್ಥನೆಯಲ್ಲಿಯೂ ವಾಕ್ಯೋಪದೇಶದಲ್ಲಿಯೂ ನಿರತರಾಗಿರುವಂತೆ ನಮ್ಮನ್ನು ಒಪ್ಪಿಸಿಕೊಡುವೆವು ಎಂದು ಹೇಳಿದನು.
ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು.
ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.
ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು.
ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.
ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ
ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.
ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
ನೀನಾದರೋ ಕಲಿತು ದೃಢವಾಗಿ ನಂಬಿದವುಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬದನ್ನು ಆಲೋಚಿಸು.
ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು.
ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ?
ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.