ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.
Cross references
ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
ನಾನು ನಿಮಗೆ ಸುಬೋಧನೆಯನ್ನು ಮಾಡುವೆನು; ನೀವು ನನ್ನ ಕಟ್ಟಳೆಯನ್ನು ಬಿಡಬೇಡಿರಿ.
ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.
ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ನನ್ನ ಬೋಧನೆಯು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದಾತನದೇ.
ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ;
ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ
ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ.
ಆದರೆ ನನ್ನ ವಿಷಯಗಳು ನಿಮಗೆ ಸಹ ಗೊತ್ತಾ ಗುವ ಹಾಗೆಯೂ ನಾನು ಹೇಗಿದ್ದೇನೆಂದು ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.
ಆದಾಗ್ಯೂ ಈಗಾ ಗಲೇ ನಾವು ಯಾವದನ್ನು ಹೊಂದಿಕೊಂಡಿದ್ದೇವೋ ಅದೇ ಸೂತ್ರವನ್ನು ಅನುಸರಿಸಿ ನಡೆದುಕೊಳ್ಳುತ್ತಾ ಒಂದೇ ಮನಸ್ಸುಳ್ಳವರಾಗಿರೋಣ.
ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ.
ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು.
ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ
ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.
ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.
ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ
ನೀನಾದರೋ ಕಲಿತು ದೃಢವಾಗಿ ನಂಬಿದವುಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬದನ್ನು ಆಲೋಚಿಸು.
ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
ನೀನಾದರೋ ಸ್ವಸ್ಥಬೋಧನೆಗೆ ಅನು ಗುಣವಾಗಿ ಮಾತನಾಡು.
ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.
ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ. ಈ ಎರಡು ಪತ್ರಿಕೆ ಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ನಿರ್ಮಲವಾದ ಮನಸ್ಸನ್ನು ಪ್ರೇರಿಸಿದ್ದೇನೆ.
ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ.
ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.