Home Bibles 1 ತಿಮೋಥೆಯ 5:21 · ಕನ್ನಡ ಬೈಬಲ್
1 ತಿಮೋಥೆಯ 5:21 · ಕನ್ನಡ ಬೈಬಲ್

ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.

Cross references

ಲೇವ್ಯಕಾಂಡ 14:42

ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು; ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವು ಮಾಡಬೇಕು.

ಲೇವ್ಯಕಾಂಡ 19:15

ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.

ದ್ವಿತೀಯೋಪದೇಶಕಾಂಡ 1:7

ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್‌ ಎಂಬ ಮಹಾನದಿಯ ಬಳಿಗೂ ಹೋಗಿರಿ.

ದ್ವಿತೀಯೋಪದೇಶಕಾಂಡ 33:9

ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.

ಕೀರ್ತನೆಗಳು 107:43

ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.

ಕೀರ್ತನೆಗಳು 119:34

ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು.

ಸಾಮೇತಿಗಳು 18:5

ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ.

ಮಲಾಕಿ 2:9

ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.

ಮತ್ತಾಯ 16:27

ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.

ಮತ್ತಾಯ 25:41

ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.

ಮತ್ತಾಯ 28:20

ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.

ಲೂಕ 20:21

ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.

ಅಪೋಸ್ತಲರ ಕೃತ್ಯಗಳು 15:37

ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.

2 ಕೊರಿಂಥದವರಿಗೆ 5:16

ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,

1 ತೆಸಲೋನಿಕದವರಿಗೆ 5:27

ಈ ಪತ್ರಿಕೆಯನ್ನು ಪರಿಶುದ್ಧ ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಿಂದ ಆಜ್ಞಾಪಿಸುತ್ತೇನೆ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

1 ತಿಮೋಥೆಯ 6:13

ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--

2 ತಿಮೋಥೆಯ 2:14

ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.

2 ತಿಮೋಥೆಯ 4:1

ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--

ಯಾಕೋಬ 2:1

ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನ ನಂಬಿ ಕೆಯ ವಿಷಯದಲ್ಲಿ ನೀವು ಪಕ್ಷಪಾತಿಗಳಾಗಿರಬಾರದು.

ಯಾಕೋಬ 3:17

ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.

2 ಪೇತ್ರ 2:4

ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.

ಯೂದ 1:6

ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.

ಪ್ರಕಟನೆ 12:7

ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು.

ಪ್ರಕಟನೆ 14:10

ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.

Interlinear

Choose Theme