ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
Cross references
ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು; ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವು ಮಾಡಬೇಕು.
ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.
ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು.
ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ.
ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.
ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.
ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
ಈ ಪತ್ರಿಕೆಯನ್ನು ಪರಿಶುದ್ಧ ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಿಂದ ಆಜ್ಞಾಪಿಸುತ್ತೇನೆ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.
ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನ ನಂಬಿ ಕೆಯ ವಿಷಯದಲ್ಲಿ ನೀವು ಪಕ್ಷಪಾತಿಗಳಾಗಿರಬಾರದು.
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು.
ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.