ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.
Cross references
ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾ ಗಲಿ ಮದ್ಯಪಾನವನ್ನಾಗಲಿ ಕುಡಿದು ಸಭೆಯ ಗುಡಾರ ದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ನಿಮ್ಮ ವಂಶಾವಳಿಯು ಇರುವ ವರೆಗೂ ಇದು ಶಾಶ್ವತವಾಗಿ ರುವ ಕಟ್ಟಳೆಯಾಗಿದೆ.
ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
ದ್ರಾಕ್ಷಾರಸವನ್ನು ಕುಡಿ ಯುವದು ರಾಜರಿಗೆ ಯೋಗ್ಯವಲ್ಲ; ಓ ಲೆಮೂ ವೇಲನೇ, ಅದು ಅರಸರಿಗೆ ಬೇಡ; ಇಲ್ಲವೆ ಪ್ರಭುಗ ಳಿಗೆ ಕುಡಿಯುವದು ಹಿತವಲ್ಲ;
ಇದಲ್ಲದೆ ಯಾವ ಯಾಜಕನೇ ಆಗಲಿ, ಒಳಗಿನ ಅಂಗಳದಲ್ಲಿ ಪ್ರವೇಶಿಸುವಾಗ ದ್ರಾಕ್ಷಾ ರಸವನ್ನು ಕುಡಿಯಬಾರದು.
ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ
ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ