ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
Cross references
ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು.
ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನಿನ್ನ ತಂದೆಯ ಮನೆಯವರು ಐಗುಪ್ತದಲ್ಲಿ ಫರೋ ಹನ ಮನೆಯೊಳಗೆ ಇರುವಾಗ ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ?
ಅದಕ್ಕವನು--ಇಗೋ, ಈ ಪಟ್ಟಣ ದಲ್ಲಿ ದೇವರ ಮನುಷ್ಯನೊಬ್ಬನಿದ್ದಾನೆ; ಅವನು ಗೌರವ ವುಳ್ಳ ಮನುಷ್ಯನು. ಅವನು ಹೇಳುವದೆಲ್ಲಾ ನಿಶ್ಚಯ ವಾಗಿ ಆಗುವದು. ಈಗ ನಾವು ಅಲ್ಲಿಗೆ ಹೋಗೋಣ; ಒಂದು ವೇಳೆ, ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ಅವನು ತಿಳಿಸುವನು ಅಂದನು.
ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
ಅವನನ್ನು ಮಾರ್ಗದಿಂದ ಹಿಂದಕ್ಕೆ ಕರತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ--ಇವನೇ ಕರ್ತನ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು; ಕರ್ತನು ಅವನಿಗೆ ಹೇಳಿದ ಮಾತಿನ ಪ್ರಕಾರ ಕರ್ತನು ಅವನನ್ನು ಸಿಂಹಕ್ಕೆ ಒಪ್ಪಿಸಿ ದ್ದಾನೆ; ಅದು ಅವನನ್ನು ಸೀಳಿ ಕೊಂದುಹಾಕಿತು ಅಂದನು.
ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು.
ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
ತಿರುಗಿ ಅವನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯ ವನು ಬಂದು ಎಲೀಯನ ಮುಂದೆ ತನ್ನ ಮೊಣ ಕಾಲೂರಿಕೊಂಡು ಇವನಿಗೆ--ದೇವರ ಮನುಷ್ಯನೇ, ನೀನು ದಯೆತೋರು, ನನ್ನ ಪ್ರಾಣವೂ ನಿನ್ನ ಸೇವಕ ರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ.
ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.
ಆಗ ಅವನು--ನಾನು ನೋಡಿದ ಆ ಶಿರೋನಾಮವೇನು ಅಂದನು. ಅದಕ್ಕೆ ಆ ಪಟ್ಟಣದ ಜನರು ಅವನಿಗೆಯೆಹೂದದಿಂದ ಬಂದು ಬೇತೇಲಿನ ಬಲಿಪೀಠಕ್ಕೆ ವಿರೋಧವಾಗಿ ನೀನು ಮಾಡಿದ ಈ ಕಾರ್ಯಗಳನ್ನು ಸಾರಿ ಹೇಳಿದ ದೇವರ ಮನುಷ್ಯನ ಸಮಾಧಿ ಅಂದರು.
ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು.
ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ ಅವರ ಸೇವೆಗೆ ಯಾಜಕರ ಸರದಿ ಗಳನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ ಯಾಜಕರ ಮುಂದೆ ಸ್ತುತಿಸುವದಕ್ಕೂ ಸೇವೆಮಾಡು ವದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ ಸೇವೆಯ ಬಾಗಲಲ್ಲಿ ತಮ್ಮ ಸರದಿಗಳಾಗಿ ದ್ವಾರಪಾಲಕರನ್ನೂ ನೇಮಿಸಿದನು. ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.
ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು.
ದೇವರ ಮನುಷ್ಯ ನಾದ ದಾವೀದನ ಗೀತವಾದ್ಯಗಳನ್ನು ಹಿಡಿಯುವ ಜೆಕರ್ಯನ ಸಹೋದರರಾದ ಶೆಮಾಯನೂ ಅಜರೇ ಲನೂ ಮಿಲಲೈಯನೂ ಗಿಲಾಲೈಯನೂ. ಮಾಯೈ ಯನೂ ನೆತನೇಲನೂ ಯೆಹೂದನೂ ಹನಾನೀಯೂ ನಡೆದರು; ಶಾಸ್ತ್ರಿಯಾದ ಎಜ್ರನು ಇವರ ಮುಂದೆ ನಡೆದನು.
ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ.
ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಆ ಕಡೆಗೆ ನೋಡಿರಿ.
ಆಗ ಯೆರೆವಿಾಯನು ನೇರೀಯನ ಮಗನಾದ ಬಾರೂಕನನ್ನು ಕರೆದನು; ಬಾರೂಕನು ಯೆರೆವಿಾಯನ ಬಾಯಿಂದ ಕರ್ತನು ಅವನಿಗೆ ಹೇಳಿದ್ದ ಮಾತು ಗಳನ್ನೆಲ್ಲಾ ಕೇಳಿ ಪುಸ್ತಕದ ಸುರಳಿಯಲ್ಲಿ ಬರೆ ದನು.
ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ.
ಆದದರಿಂದ ನನ್ನ ಅತಿ ಪ್ರಿಯವಾದವರೇ, ವಿಗ್ರಹಾರಾಧನೆಯಿಂದ ಓಡಿಹೋಗಿರಿ.
ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.
ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.
ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ