ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
Cross references
ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ.
ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.
ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ನಾನು ಇನ್ನೂ ನಿಮ್ಮ ಬಳಿಯಲ್ಲಿ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ;
ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.
ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;
ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,
ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.