Home Bibles 1 ತಿಮೋಥೆಯ 6:17 · ಕನ್ನಡ ಬೈಬಲ್
1 ತಿಮೋಥೆಯ 6:17 · ಕನ್ನಡ ಬೈಬಲ್

ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ

Cross references

ಆದಿಕಾಂಡ 13:2

ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.

ದ್ವಿತೀಯೋಪದೇಶಕಾಂಡ 6:10

ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ

ದ್ವಿತೀಯೋಪದೇಶಕಾಂಡ 8:17

ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.

ದ್ವಿತೀಯೋಪದೇಶಕಾಂಡ 33:15

ಪೂರ್ವಕಾಲದ ಪರ್ವತಗಳ ಮುಖ್ಯವಾದವುಗ ಳಿಂದಲೂ ನಿತ್ಯವಾದ ಬೆಟ್ಟಗಳ ಅಮೂಲ್ಯವಾದ ವುಗಳಿಂದಲೂ

2 ದಿನವೃತ್ತಾಂತ 26:16

ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.

2 ದಿನವೃತ್ತಾಂತ 32:25

ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.

ಯೋಬ 1:1

ಊಚ್‌ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.

ಯೋಬ 31:24

ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ,

ಕೀರ್ತನೆಗಳು 10:3

ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.

ಕೀರ್ತನೆಗಳು 52:7

ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.

ಕೀರ್ತನೆಗಳು 62:8

ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.

ಕೀರ್ತನೆಗಳು 62:10

ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.

ಕೀರ್ತನೆಗಳು 73:5

ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ;

ಕೀರ್ತನೆಗಳು 84:11

ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.

ಕೀರ್ತನೆಗಳು 104:28

ನೀನು ಅವುಗಳಿಗೆ ಕೊಡಲು ಅವು ಕೂಡಿಸುತ್ತವೆ; ನೀನು ನಿನ್ನ ಕೈ ತೆರೆಯಲು ಒಳ್ಳೇ ದರಿಂದ ತೃಪ್ತಿಯಾಗುತ್ತವೆ.

ಕೀರ್ತನೆಗಳು 118:8

ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು.

ಸಾಮೇತಿಗಳು 11:28

ತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು.

ಸಾಮೇತಿಗಳು 23:5

ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.

ಸಾಮೇತಿಗಳು 27:24

ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ಪ್ರತಿಯೊಂದು ವಂಶಾವಳಿಗೆ ಇರುತ್ತದೋ?

ಸಾಮೇತಿಗಳು 30:9

ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.

ಸಭಾಪ್ರಸಂಗಿ 5:13

ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.

ಸಭಾಪ್ರಸಂಗಿ 5:18

ನಾನು ಕಂಡದ್ದನ್ನು ನೋಡು; ದೇವರು ತನಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ತಾನು ಕೈಕೊಂಡ ಪ್ರಯಾಸದ ಸುಖವನ್ನು ಅನುಭವಿಸಿ ತಿಂದು ಕುಡಿ ಯುವದು ಮನುಷ್ಯನಿಗೆ ಒಳ್ಳೆಯದೂ ಉಚಿತವಾದದ್ದೂ ಆಗಿದೆ; ಅದು ಅವನ ಪಾಲು.

ಯೆರೆಮಿಯ 2:31

ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.

ಯೆರೆಮಿಯ 9:23

ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.

ಯೆರೆಮಿಯ 17:7

ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ

ಯೆಹೆಜ್ಕೇಲ 16:49

ಇಗೋ, ಸೊದೋಮ್‌ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.

ಯೆಹೆಜ್ಕೇಲ 16:56

ನಿನ್ನ ಸಹೋದರಿಯಾದ ಸೊದೋಮ್‌ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ.

ದಾನಿಯೇಲ 4:30

ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.

ದಾನಿಯೇಲ 5:19

ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.

ಹೊಶೇಯ 13:6

ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.

ಹಬಕ್ಕೂಕ 1:15

ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.

ಮತ್ತಾಯ 6:32

(ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.

ಮತ್ತಾಯ 19:23

ತರುವಾಯ ಯೇಸು ತನ್ನ ಶಿಷ್ಯರಿಗೆ-- ಐಶ್ವರ್ಯ ವಂತನು ಪರಲೋಕ ರಾಜ್ಯದಲ್ಲಿ ಸೇರುವದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಮತ್ತಾಯ 25:16

ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು.

ಮತ್ತಾಯ 27:57

ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.

ಮಾರ್ಕ 10:24

ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ.

ಲೂಕ 12:15

ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.

ಲೂಕ 19:2

ಆಗ ಇಗೋ, ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯ ನಿದ್ದನು. ಇವನು ಸುಂಕದವರಲ್ಲಿ ಮುಖ್ಯಸ್ಥನೂ ಐಶ್ವರ್ಯವಂತನೂ ಆಗಿದ್ದನು.

ಲೂಕ 19:9

ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.

ಅಪೋಸ್ತಲರ ಕೃತ್ಯಗಳು 14:17

ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.

Interlinear

Choose Theme