ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
Cross references
ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ
ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.
ಪೂರ್ವಕಾಲದ ಪರ್ವತಗಳ ಮುಖ್ಯವಾದವುಗ ಳಿಂದಲೂ ನಿತ್ಯವಾದ ಬೆಟ್ಟಗಳ ಅಮೂಲ್ಯವಾದ ವುಗಳಿಂದಲೂ
ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.
ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ,
ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ;
ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ನೀನು ಅವುಗಳಿಗೆ ಕೊಡಲು ಅವು ಕೂಡಿಸುತ್ತವೆ; ನೀನು ನಿನ್ನ ಕೈ ತೆರೆಯಲು ಒಳ್ಳೇ ದರಿಂದ ತೃಪ್ತಿಯಾಗುತ್ತವೆ.
ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು.
ತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು.
ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ಪ್ರತಿಯೊಂದು ವಂಶಾವಳಿಗೆ ಇರುತ್ತದೋ?
ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.
ನಾನು ಕಂಡದ್ದನ್ನು ನೋಡು; ದೇವರು ತನಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ತಾನು ಕೈಕೊಂಡ ಪ್ರಯಾಸದ ಸುಖವನ್ನು ಅನುಭವಿಸಿ ತಿಂದು ಕುಡಿ ಯುವದು ಮನುಷ್ಯನಿಗೆ ಒಳ್ಳೆಯದೂ ಉಚಿತವಾದದ್ದೂ ಆಗಿದೆ; ಅದು ಅವನ ಪಾಲು.
ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ
ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
ನಿನ್ನ ಸಹೋದರಿಯಾದ ಸೊದೋಮ್ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ.
ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.
ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.
ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.
(ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.
ತರುವಾಯ ಯೇಸು ತನ್ನ ಶಿಷ್ಯರಿಗೆ-- ಐಶ್ವರ್ಯ ವಂತನು ಪರಲೋಕ ರಾಜ್ಯದಲ್ಲಿ ಸೇರುವದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು.
ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.
ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ.
ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
ಆಗ ಇಗೋ, ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯ ನಿದ್ದನು. ಇವನು ಸುಂಕದವರಲ್ಲಿ ಮುಖ್ಯಸ್ಥನೂ ಐಶ್ವರ್ಯವಂತನೂ ಆಗಿದ್ದನು.
ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.
ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.