ವಿಶ್ವಾಸಿಗಳಾದ ಯಜಮಾನರಿರುವವರು, ಆ ಯಜಮಾನರನ್ನು ಸಹೋದರರೆಂದು ತಾತ್ಸಾರ ಮಾಡದೆ ಆದಾಯದಲ್ಲಿ ಪಾಲು ಹೊಂದುವವರೂ ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸೇವೆ ಮಾಡಬೇಕು. ಇವುಗಳನ್ನು ಬೋಧಿಸಿ ಎಚ್ಚರಿಸು.
Cross references
ಅವನು ಹಾಗರಳನ್ನು ಕೂಡಿದಾಗ ಗರ್ಭಿಣಿ ಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದಾಗ ಅವಳ ಯಜಮಾನಿಯು ಅವಳ ದೃಷ್ಟಿಯಲ್ಲಿ ತಿರಸ್ಕರಿಸ ಲ್ಪಟ್ಟಳು.
ಅವರು ಮೋಶೆಗೂ ಆರೋನ ನಿಗೂ ವಿರೋಧವಾಗಿ ಕೂಡಿಕೊಂಡು--ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ; ಸಭೆಯೂ ಸಭೆ ಯಲ್ಲಿರುವ ಎಲ್ಲರೂ ಪರಿಶುದ್ಧರೇ, ಕರ್ತನು ಅವರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ನೀವು ನಿಮ್ಮನ್ನು ಸಭೆಗಿಂತ ಹೆಚ್ಚಾಗಿ ನೀವೇ ಹೆಚ್ಚಿಸಿಕೊಳ್ಳು ವದು ಯಾಕೆ ಎಂದು ಅವರಿಗೆ ಹೇಳಿದರು.
ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.
ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ.
ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಎಫೆಸ ದಲ್ಲಿರುವ ಪರಿಶುದ್ಧರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ--
ಹೀಗಿರಲಾಗಿ ನಾನು ಸಹ ಕರ್ತನಾದ ಯೇಸು ವಿನಲ್ಲಿರುವ ನಿಮ್ಮ ನಂಬಿಕೆಯ ವಿಷಯವಾಗಿಯೂ ಪರಿಶುದ್ಧರೆಲ್ಲರ ಕಡೆಗಿರುವ ಪ್ರೀತಿಯ ವಿಷಯವಾಗಿ ಯೂ ಕೇಳಿ
ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.
ಕೊಲೊಸ್ಸೆಯಲ್ಲಿ ಕ್ರಿಸ್ತನಲ್ಲಿರುವ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರರಿಗೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ;
ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸಮ ವಾದದ್ದನ್ನೂ ಕೊಡಿರಿ.
ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
ಈ ವಿಷಯಗಳನ್ನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು.
ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಸಹೋದರರೆಂದೂ
ನೀನಾದರೋ ಸ್ವಸ್ಥಬೋಧನೆಗೆ ಅನು ಗುಣವಾಗಿ ಮಾತನಾಡು.
ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ.
ನಾನು ಸೆರೆಯಲ್ಲಿ ಪಡೆದಿರುವ ನನ್ನ ಮಗನಾದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.
ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,
ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.