ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Cross references
ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
(ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳ ದವರೂ ಹೊಸ ವಿಷಯಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ).
ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ.
ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.
ಹೀಗಿರುವದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳನ್ನು ನೆನಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಚ್ಚಳಪಡುತ್ತೇವೆ.
ಹೀಗಿರುವದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ, ನಾವು ಮಾತಿನಿಂದಾಗಲಿ ನಮ್ಮ ಪತ್ರಿಕೆ ಯಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ.
ಕಲ್ಪನಾ ಕಥೆ ಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಾನು ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆ ಯಿಂದುಂಟಾಗುವ ದೈವಭಕ್ತಿಯನ್ನು ವೃದ್ಧಿಮಾಡುವ
ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರ ಗಳಿಗೆ ತಿರುಗಿಕೊಂಡಿದ್ದಾರೆ;
ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.
ಆದರೆ ಅಜ್ಜೀಕಥೆಗಳಂತಿರುವ ಅಶುದ್ಧವಾದ ಆ ಕಥೆಗಳನ್ನು ನಿರಾಕರಿಸಿ ನೀನು ದೇವ ಭಕ್ತಿಯ ವಿಷಯದಲ್ಲಿಯೇ ಸಾಧನೆ ಮಾಡಿಕೋ.
ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.
ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.
ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.
ನೀನಾದರೋ ಕಲಿತು ದೃಢವಾಗಿ ನಂಬಿದವುಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬದನ್ನು ಆಲೋಚಿಸು.
ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ.
ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು.
ಅವರು ಯೆಹೂದ್ಯರ ಕಲ್ಪನಾಕಥೆಗಳಿಗೂ ಸತ್ಯಭ್ರಷ್ಟರಾದ ಮನುಷ್ಯರ ಆಜ್ಞೆ ಗಳಿಗೂ ಲಕ್ಷ್ಯಕೊಡಬಾರದು.
ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನ್ಯಾಯಪ್ರಮಾಣದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಯಾಕಂದರೆ ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.
ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.