ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.
Cross references
ತನ್ನನ್ನು ತಾನೇ ಐಶ್ವರ್ಯವಂತನಾಗಿ ಮಾಡಿಕೊಳ್ಳುವವನು ಇದ್ದಾನೆ; ಅವನಿಗೆ ಏನೂ ಇರು ವದಿಲ್ಲ. ತನ್ನನ್ನು ಬಡವನಾಗಿ ಮಾಡಿಕೊಳ್ಳುವವನಿ ದ್ದಾನೆ; ಅವನಿಗೆ ಎಷ್ಟೋ ಐಶ್ವರ್ಯವಿದೆ.
ಸುಳ್ಳಾದ ದಾನದ ವಿಷ ಯವಾಗಿ ಹೊಗಳಿಕೊಳ್ಳುವವನು ಮಳೆ ಇಲ್ಲದ ಮೋಡ ಗಳ ಮತ್ತು ಗಾಳಿಯ ಹಾಗೆ ಇದ್ದಾನೆ.
ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ.
ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು.
ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ
ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.
ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?
ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.
ಒಬ್ಬನು ವಾಗ್ವಾದ ಪ್ರಿಯನಾಗಿ ಕಾಣಿಸಿ ಕೊಂಡರೆ ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳುಕೊಳ್ಳಲಿ.
ಹೇಗಂದರೆ ಮೊದಲನೆಯದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.
ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿ ಬಿಟ್ಟರೂ ಒಬ್ಬನು ನಿಮ್ಮನ್ನು ಮರುಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ನೀವು ಸಹಿಸಿಕೊಳ್ಳುತ್ತೀರಲ್ಲಾ.
ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.
ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು
ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.
ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
ಗುಣಗುಟ್ಟದೆ ಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ.
ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.
ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
ಕಲ್ಪನಾ ಕಥೆ ಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಾನು ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆ ಯಿಂದುಂಟಾಗುವ ದೈವಭಕ್ತಿಯನ್ನು ವೃದ್ಧಿಮಾಡುವ
ಅವರು ನ್ಯಾಯ ಪ್ರಮಾಣದ ಉಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲೀ ತಾವು ದೃಢವಾಗಿ ಮಾತನಾಡುವ ವಿಷಯವಾಗಲೀ ಇಂಥದ್ದೆಂದು ತಿಳಿಯದವರಾಗಿ ದ್ದಾರೆ.
ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು.
ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.
ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.
ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ
ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನ್ಯಾಯಪ್ರಮಾಣದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಯಾಕಂದರೆ ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ?
ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.
ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ