ಆಗ ದೇವರು ಸೊಲೊಮೋನನಿಗೆ--ಇದು ನಿನ್ನ ಹೃದಯ ದಲ್ಲಿ ಇದ್ದದರಿಂದಲೂ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ನಿನ್ನ ಶತ್ರುಗಳ ಪ್ರಾಣವನ್ನೂ ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನವನ್ನೂ ತಿಳುವಳಿಕೆ ಯನ್ನೂ ನೀನು ಕೇಳಿದ್ದರಿಂದ ಅವು ನಿನಗೆ ಕೊಡ ಲ್ಪಟ್ಟವು.
Cross references
ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ
ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ.
ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು.
ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು.
ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
ನನ್ನ ಮೂಲಕ ರಾಜರು ಆಳುವರು. ಪ್ರಧಾನರು ತೀರ್ಪು ಕೊಡುವರು.
ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.
ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ.
ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.