Home Bibles 2 ದಿನವೃತ್ತಾಂತ 1:11 · ಕನ್ನಡ ಬೈಬಲ್
2 ದಿನವೃತ್ತಾಂತ 1:11 · ಕನ್ನಡ ಬೈಬಲ್

ಆಗ ದೇವರು ಸೊಲೊಮೋನನಿಗೆ--ಇದು ನಿನ್ನ ಹೃದಯ ದಲ್ಲಿ ಇದ್ದದರಿಂದಲೂ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ನಿನ್ನ ಶತ್ರುಗಳ ಪ್ರಾಣವನ್ನೂ ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನವನ್ನೂ ತಿಳುವಳಿಕೆ ಯನ್ನೂ ನೀನು ಕೇಳಿದ್ದರಿಂದ ಅವು ನಿನಗೆ ಕೊಡ ಲ್ಪಟ್ಟವು.

Cross references

1 ಸಮುವೇಲ 16:7

ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.

1 ಅರಸುಗಳು 3:11

ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ

1 ಅರಸುಗಳು 3:28

ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.

1 ಅರಸುಗಳು 8:18

ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ.

1 ಅರಸುಗಳು 10:24

ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು.

1 ದಿನವೃತ್ತಾಂತ 28:2

ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು.

1 ದಿನವೃತ್ತಾಂತ 29:17

ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.

ಸಾಮೇತಿಗಳು 8:15

ನನ್ನ ಮೂಲಕ ರಾಜರು ಆಳುವರು. ಪ್ರಧಾನರು ತೀರ್ಪು ಕೊಡುವರು.

ಸಾಮೇತಿಗಳು 14:8

ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.

ಸಾಮೇತಿಗಳು 23:7

ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ.

ಅಪೋಸ್ತಲರ ಕೃತ್ಯಗಳು 5:4

ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.

ಹೆಬ್ರಿಯರಿಗೆ 4:12

ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.

ಯಾಕೋಬ 3:13

ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.

ಯಾಕೋಬ 3:17

ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.

Interlinear

Choose Theme