ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.
Cross references
ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು.
ಇದಲ್ಲದೆ ಕರ್ತನು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ ಇಸ್ರಾಯೇ ಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸ ನಿಗಾದರೂ ಇಲ್ಲದಂಥ ರಾಜ್ಯದ ಮಹಿಮೆಯನ್ನು ಅವನಿಗೆ ಕೊಟ್ಟನು.
ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದ ಲ್ಲಿಯೂ ಭೂಮಿಯ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.
ಹೀಗೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದ ಎಲ್ಲರಿಗಿಂತಲೂ ನಾನು ಅಭಿವೃದ್ಧಿ ಹೊಂದಿ ದೊಡ್ಡವನಾಗಿದ್ದೆನು.
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.