ದಾವೀದನು ಕರ್ತನ ಮಂಜೂಷವನ್ನು ಕಿರ್ಯತ್ಯಾ ರೀಮಿನಿಂದ ತಾನು ಅದಕ್ಕೊಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಯಾಕಂದರೆ ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಡೇರೆಯನ್ನು ಹಾಕಿ ಸಿದ್ದನು.
Cross references
ಕೆರೂಬಿಗಳ ಮಧ್ಯದಲ್ಲಿ ವಾಸವಾಗಿ ರುವ ಸೈನ್ಯಗಳ ಕರ್ತನೆಂಬ ಹೆಸರುಳ್ಳ ದೇವರ ಮಂಜೂ ಷವನ್ನು ಯೆಹೂದದ ಬಾಳಾದಿಂದ ತರುವದಕ್ಕೆ ಹೊರಟನು.
ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.
ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು.
ಇದಲ್ಲದೆ ದಾವೀದನ ಪಟ್ಟಣದಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿ ಕೊಂಡು ದೇವರ ಮಂಜೂಷಕ್ಕೋಸ್ಕರ ಸ್ಥಳವನ್ನು ಸಿದ್ಧಮಾಡಿ ಅದರ ನಿಮಿತ್ತ ಗುಡಾರ ಹಾಕಿಸಿದನು.
ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.
ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.
ಹೀಗೆಯೇ ದಾವೀದನೂ ಇಸ್ರಾಯೇಲಿನ ಹಿರಿ ಯರೂ ಸಹಸ್ರಗಳ ಮೇಲೆ ಇರುವ ಅಧಿಪತಿಗಳೂ ಸಂತೋಷವಾಗಿ ಒಬೇದೆದೋಮನ ಮನೆಯೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು.
ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.