ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
Cross references
ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
ಹೀಗೆ ಮೋಶೆಯು ಕರ್ತನ ಬಳಿಗೆ ತಿರಿಗಿ ಹೋಗಿ ಹೇಳಿದ್ದೇನಂದರೆ, ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.
ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು.
ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು.
ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ.
ಅವರು ಹೋರೇಬಿ ನಲ್ಲಿ ಕರುವನ್ನು ಮಾಡಿ ಎರಕದ ವಿಗ್ರಹಕ್ಕೆ ಅಡ್ಡ ಬಿದ್ದರು.
ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ?
ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.
ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.