ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು.
Cross references
ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.
ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
ನೀನು ಕಂಡ ಎಲ್ಲಾ ಸ್ಥಳಗಳಲ್ಲಿ ನಿನ್ನ ದಹನ ಬಲಿಗಳನ್ನು ಅರ್ಪಿಸದ ಹಾಗೆ ನೋಡಿಕೋ;
ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.
ನಿಮ್ಮ ಸ್ವಾಸ್ತ್ಯದ ದೇಶವು ಅಶುದ್ಧ ವಾಗಿದ್ದರೆ ಕರ್ತನ ಗುಡಾರವಿರುವ ಕರ್ತನ ಸ್ವಾಸ್ತ್ಯದ ದೇಶಕ್ಕೆ ನೀವು ದಾಟಿ ಬಂದು ನಮ್ಮ ಮಧ್ಯದಲ್ಲಿ ಸ್ವಾಸ್ತ್ಯವನ್ನು ತೆಗೆದುಕೊಳ್ಳಿರಿ. ಕರ್ತನ ಬಲಿಪೀಠದ ಹೊರತಾಗಿ ನಿಮಗೋಸ್ಕರ ಒಂದು ಬಲಿಪೀಠವನ್ನು ಕಟ್ಟಿಕೊಳ್ಳುವದರಿಂದ ನೀವು ಕರ್ತನಿಗೂ ನಮಗೂ ವಿರೋಧವಾಗಿ ತಿರುಗಿಬೀಳಬೇಡಿರಿ;
ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.
ಕರ್ತನಿಗೆ ಆತನ ಹೆಸರಿನ ಘನವನ್ನೂ ತನ್ನಿರಿ; ಅರ್ಪಣೆಯನ್ನು ತೆಗೆದುಕೊಂಡು ಆತನ ಮುಂದೆ ಬನ್ನಿರಿ. ಪರಿಶುದ್ಧತ್ವ ವೆಂಬ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ.
ಆಗ ದಾವೀದನು -- ಕರ್ತನಾದ ದೇವರ ಮನೆಯೂ ಇಸ್ರಾಯೇಲಿನ ದಹನಬಲಿ ಪೀಠವೂ ಇದೇ ಅಂದನು.
ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.
ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು.
ತಮ್ಮ ಪಿತೃಗಳ ದೇವರಾದ ಕರ್ತನನ್ನು ತಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದ ಲೂ ಹುಡುಕಬೇಕೆಂದೂ
ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು.
ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು.
ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು.
ಆದದರಿಂದ ಯೆಹೂದ ದವರು ಕರ್ತನನ್ನು ಹುಡುಕಲು ಕೂಡಿಕೊಂಡರು. ನಿಶ್ಚಯವಾಗಿ ಸಮಸ್ತ ಯೆಹೂದದ ಪಟ್ಟಣಗಳಿಂದ ಕರ್ತನನ್ನು ಹುಡುಕಲು ಬಂದರು.
ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು.
ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ;
ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
ಯಾರಿಗೆ ನೀನು ಬಲವಾಗಿ ದ್ದೀಯೋ ಆ ಮನುಷ್ಯನು ಭಾಗ್ಯವಂತನು; ಯಾರಲ್ಲಿ ಆತನ ಮಾರ್ಗಗಳು ಇವೆಯೋ ಅವನೇ ಧನ್ಯನು.
ಓ ದೇವರೇ, ನನ್ನ ಹೃದಯವು ಸಿದ್ಧವಾಗಿದೆ; ನಾನು ನನ್ನ ಹೆಚ್ಚಳ ದೊಂದಿಗೆ ಹಾಡಿ ಕೀರ್ತಿಸುವೆನು.
ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ ಆಗ ತನ್ನಲ್ಲಿಯೇ ಬಹಳವಾಗಿ ಬೇಸರ ಗೊಂಡನು ಮತ್ತು ಅವನನ್ನು ಅದರಿಂದ ತಪ್ಪಿಸ ಬೇಕೆಂದು ತನ್ನ ಹೃದಯದಲ್ಲಿ ತಿಳಿದು ಸೂರ್ಯಾಸ್ತ ಮಾನದ ವರೆಗೂ ಪ್ರಯತ್ನಪಟ್ಟನು.
ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ ಮತ್ತು ಅವರು ದುಷ್ಟತನದ ಮೇಲೆ ಮನಸ್ಸಿಡುತ್ತಾರೆ.
ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು.
ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.