ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ, ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು.
Cross references
ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.
ಇದರ ನಿಮಿತ್ತ ಸೊಲೊಮೋನನು ಯಾರೊ ಬ್ಬಾಮನನ್ನು ಕೊಲ್ಲಲು ಹುಡುಕಿದನು; ಆದದರಿಂದ ಯಾರೊಬ್ಬಾಮನು ಎದ್ದು ಐಗುಪ್ತದ ಅರಸನಾದ ಶೀಷಕನ ಬಳಿಗೆ ಐಗುಪ್ತಕ್ಕೆ ಓಡಿಹೋಗಿ ಸೊಲೊ ಮೋನನು ಸಾಯುವ ವರೆಗೂ ಐಗುಪ್ತದಲ್ಲಿದ್ದನು.
ಅವರು ಇಸ್ರಾಯೇಲಿನ ಮಕ್ಕಳ ಮುಂದೆ ಕರ್ತನು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕೃತ್ಯಗಳ ಪ್ರಕಾರ ಮಾಡುತ್ತಾ ಇದ್ದರು.
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ
ಹಾಗೆಯೇ ಅವರು ಕಟ್ಟಿಸಿ ವೃದ್ಧಿಹೊಂದಿದರು. ಇದ ಲ್ಲದೆ ಆಸನಿಗೆ ಖೇಡ್ಯಗಳನ್ನೂ ಈಟಿಗಳನ್ನೂ ಹಿಡಿ ಯುವ ರಾಣುವೆ ಇತ್ತು. ಯೆಹೂದದವರು ಮೂರು ಲಕ್ಷಮಂದಿಯೂ ಬೆನ್ಯಾವಿಾನಿನವರು ಗುರಾಣಿಗಳನ್ನು ಹಿಡಿಯುವವರೂ, ಬಿಲ್ಲುಗಳನ್ನು ಎಸೆಯುವವರೂ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.
ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.
ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.
ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
ನಮ್ಮ ಹೃದಯದ ಸಂತೋಷವು ನಿಂತುಹೋಯಿತು; ನಮ್ಮ ನಾಟ್ಯವು ದುಃಖದ ಕಡೆಗೆ ತಿರುಗಿತು.